Karnataka Newslive

CM ಬೊಮ್ಮಾಯಿ ಬೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ

ಬೆಂಗಳೂರು ಸಮೀಪ ನೆಲಮಂಗಲದಲ್ಲಿ ಕ್ಷೇಮವನ ಉದ್ಘಾಟಿಲು ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥರು ಕರ್ನಾಟಕದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿರವರನ್ನು ಅವರ ನಿವಾಸಕ್ಕೆ ಬೇಟಿ ನೀಡಿದರು. ಇದೇ ಸಂದರ್ಭದಲ್ಲಿ ಯೋಗಿ ಆದಿತ್ಯನಾಥರವರನ್ನು ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿರವರು ಕುಟುಂಬದ ಸದಸ್ಯರೊಂದಿಗೆ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಶುಕ್ರವಾರ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಡಾ.ಮುದ್ದುಮೋಹನ್ (IAS Retd) ರವರ ಹಿಂದೂಸ್ಥಾನಿ ಗಾಯನ

ಶ್ರೀ ಅರಬಿಂದೋ ವಿಧ್ಯಾ ಮಂದಿರ ಹಾಗೂ ಕಲಾಭಾರತಿ ಅಕಾಡೆಮಿಯು ಗಣೇಶ ಚತುರ್ಥಿ ಅಂಗವಾಗಿ ಕಾಲೇಜಿನ ಆಡಿಟೋರಿಯಮ್ ನಲ್ಲಿ ಏರ್ಪಡಿಸಿರುವ ಮೂರು ದಿನಗಳ ಸಂಗೀತ ಕಾರ್ಯಕ್ರಮದಲ್ಲಿ ಶುಕ್ರವಾರ (02-09-2022) ಸಂಜೆ 5.30ಕ್ಕೆ ನಿವೃತ್ತ ಐ.ಎ.ಎಸ್ ಅಧಿಕಾರಿ ಹಾಗೂ ಹಿಂದೂಸ್ಥಾನಿ ಸಂಗೀತಗಾರರಾದ ಡಾ.ಮುದ್ದುಮೋಹನ್ ರವರು ಹಿಂದೂಸ್ಥಾನಿ ಗಾಯನ ಪ್ರಸ್ತುತಿಪಡಿಸಲಿದ್ದಾರೆ.

ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.2ಕ್ಕೆ

ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿ ಸೆ.2 ಕ್ಕೆ ಮುಂದೂಡಿದರು.ಮುರುಘಾ ಶರಣರ ಪರವಾಗಿ ವಕೀಲ ಕೆ.ಎನ್ ವಿಶ್ವನಾಥಯ್ಯ ಅವರು ಜಾಮೀನು ಅರ್ಜಿಯನ್ನು ಆ.29ರಂದು ಸಲ್ಲಿಸಿದ್ದರು, ಅರ್ಜಿ ವಿಚಾರಣೆಗೆ ಕೈಗೊಂಡ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾದೀಶೆ ಬಿ.ಕೆ ಕೋಮಲಾ ಅವರು ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಒಂದು ದಿನದ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಿದರು.ಸಂತ್ರಸ್ತ ಹೆಣ್ಣುಮಕ್ಕಳ ಕೋರ್ಟ್ ಗೆ ಹಾಜರುಪಡಿಸದ ಸಂದರ್ಭದಲ್ಲಿ ಇತರೆ

ಪಂ. ಗಣಪತಿ ಭಟ್ ಹಾಸಣಗಿರವರಿಗೆ ಜನ್ಮದಿನದ ಸಂಭ್ರಮ

ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ಪಂ. ಗಣಪತಿ ಭಟ್ ಹಾಸಣಗಿರವರು 71ನೇ ಜನ್ಮದಿನವನ್ನು ಕುಟುಂಬದೊಂದಿಗೆ ಸಂಭ್ರಮದಿಂದ ಆಚರಿಸಿಕೊಂಡರು, ಇದೇ ಸಂದರ್ಭದಲ್ಲಿ ನಾಡಿನ ಸಂಗೀತಗಾರರು, ಅವರ ಶಿಷ್ಯರು ಹಾಗೂ ಅಭಿಮಾನಿವರ್ಗ ಅವರಿಗೆ ಶುಭಾಶಯ ಕೋರಿ ಅಭಿಂದಿಸಿದರು.

Tumkur accident

ತುಮಕೂರು: ರಸ್ತೆ ಅಪಘಾತ 9ಮಂದಿ ಸಾವು

ತುಮಕೂರು-ಶಿರಾ ಹೆದ್ದಾರಿ ಕಳ್ಳಂಬೆಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 9ಮಂದಿ ಸಾವಿಗೀಡಾಗಿ 13 ಮಂದಿ ತೀರ್ವವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿಗೀಡದವರು ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಆಘಾತದ ಸುದ್ದಿಯು ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿದ್ದು ಸಂತಾಪ ಸೂಚಿಸಿದ್ದಾರೆ, ಮೃತರಿಗೆ 2 ಲಕ್ಷ ಹಾಗೂ ಗಯಾಳುಗಳಿಗೆ 50 ಸಾವಿರ ರೂಗಳ ಪರಿಹಾರ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ 2 ಲಕ್ಷಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದೇ

ತಪಸ್ವೀ ಕಾರ್ಯಕರ್ತರು-ಸಮರ್ಪಣೆಯ ಸಂಕೇತ -ವಿಜಯೇಂದ್ರ ಯಡಿಯೂರಪ್ಪ 

ಒಂದು ರಾಜಕೀಯ ಪಕ್ಷದ ಕಾರ್ಯಕರ್ತ ಸಹಜವಾಗಿ ಬಯಸುವುದು ತನ್ನ ಸೇವೆಗೆ ಸೂಕ್ತ ಗೌರವ ಮಾತ್ರ.ಗೌರವವೆಂದರೆ ಸಮ್ಮಾನ,ಅಧಿಕಾರವನ್ನಲ್ಲ , ಅವನ ಕನಿಷ್ಠ ನಿರೀಕ್ಷೆ ತನ್ನ ಸೇವೆ ಹಾಗೂ ಶ್ರಮವನ್ನು ಗುರುತಿಸಿ ಪಕ್ಷದ ಪ್ರಮುಖರು ಅಥವಾ ಅಧಿಕಾರಸ್ಥ ಮುಖಂಡರು ಹೆಸರಿಡಿದು ಕರೆದರಷ್ಟೇ ಸಾಕು, ಅವನು ಧನ್ಯತಾಭಾವ ಹೊಂದುತ್ತಾನೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಯಾರು ಗುರುತಿಸಲಿ ಬಿಡಲಿ ತನ್ನ ಸೇವೆ ಸಾರ್ಥಕವಾದರಷ್ಟೇ ಸಾಕು, ಈ ದೇಶ ಸುರಕ್ಷಿತವಾದರೆ ಸಾಕು ಎಂಬ ಆತ್ಮ ಸಂತೋಷವನ್ನು

ಮುರುಘಾ ಶ್ರೀಗಳ ಪ್ರಕರಣದ ತನಿಖೆ ಹೊರರಾಜ್ಯಕ್ಕೆ ವರ್ಗಾಯಿಸಲು ಸಂಸದ ಲೆಹರ್‌ ಸಿಂಗ್ ಸಲಹೆ

ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್‌ ಸಿಂಗ್ ಅವರು ಮುರುಘಾ ಶರಣರ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕದಿಂದ ಹೊರ ರಾಜ್ಯಕ್ಕೆ ವರ್ಗಾಯಿಸಿ ತನಿಖೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣ ಕುರಿತಾಗಿ ಪತ್ರ ಬರೆದಿರುವ ಅವರು ಪ್ರಭಾವಿ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್‌ಐಆರ್‌ ದಾಖಲಾಗಿದೆ. ಶರಣರ ವಿರುದ್ಧ ಇಬ್ಬರು ಅಪ್ರಾಪ್ತ ಬಾಲಕಿಯರು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಿದ್ದಾರೆ. ಇದು ಅತ್ಯಂತ ಆಘಾತಕಾರಿ ಹಾಗೂ ದುಖಃಕರ ಘಟನೆಯಾಗಿದೆ ಎಂದಿದ್ದಾರೆ.  

Mysore

ಮೈಸೂರು ಜಿಲ್ಲೆ

ಮೈಸೂರು ಎಂಬ ಹೆಸರು ಇದು “ಮಹಿಷಾಸುರ ” ಅಥವಾ “ಮಹಿಷಸುರನ ಊರು” ಎಂಬ ಶಬ್ದದಿಂದ ಬಂದಿದ್ದು ಸ್ಥಳೀಯ ಭಾಷೆಯಲ್ಲಿ ಇದರರ್ಥ ಮಹಿಷಾಸುರ ಪಟ್ಟಣ. ಮೈಸೂರು ದೇವಿ ಭಾಗವತದಲ್ಲಿ ಕಂಡುಬರುವ ಪುರಾಣ ಕಥೆಗೆ ಸಂಬಂಧಿಸಿದೆ. ದೇವಿ ಪುರಾಣದ ಕಥೆಯ ಪ್ರಕಾರ, ಮೈಸೂರನ್ನು ಎಮ್ಮೆ-ತಲೆಯ ದೈತ್ಯಾಕಾರದ ಓರ್ವ ರಾಕ್ಷಸ ರಾಜ ಮಹಿಷಾಸುರನು ಆಳಿದನು. ದೇವತೆಗಳು ಪಾರ್ವತಿ ದೇವಿಯನ್ನು ರಕ್ಷಿಸಲು ಕೇಳಿದಾಗ ದೇವತೆಗಳ ಪ್ರಾರ್ಥನೆಗೆ ಓಗೂಟ್ಟು, ಚಾಮುಂಡೇಶ್ವರಿಯಾಗಿ ಜನಿಸಿ ಮೈಸೂರು ಸಮೀಪದ ಚಾಮುಂಡಿ ಬೆಟ್ಟದ ಮೇಲೆ ದೈತ್ಯಾಕಾರದ ಮಹಿಷಾಸುರನು ಸಂಹರಿಸಲ್ಪಟ್ಟನು. 11

ಕಾಂಗ್ರೆಸ್‌ನ ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆ:

 ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆ 3500 ಕಿಲೋಮೀಟರ್ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ. ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ,ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಮೂಲಕ ಯೋಜನೆ ಹಾಕಿಕೊಂಡಿದೆ. ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಈ ಯಾತ್ರೆಯನ್ನು ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕರೆ ನೀಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ತ್ರಿವರ್ಣ ಧ್ವಜ

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಸೆಪ್ಟೆಂಬರ್ 2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿರುವ ಸರಕಾರಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ.ಪ್ರಧಾನಿ ಮೋದಿ ಫಿಶಿಂಗ್ ಬಂದರಿಗೆ ಗುದ್ದಲಿ ಪೂಜೆ, ಎನ್ ಎಂ ಪಿ ಟಿ ರ್ತ್ ಲೋಕಾರ್ಪಣೆ ಮತ್ತು ಮೂರು ಸ್ಟೋರ್ ಟ್ಯಾಂಕ್ ಗೆ ಭೂಮಿ ಪೂಜೆ ಮಾಡಲಿದ್ದಾರೆ.ಸಮಾವೇಶಕ್ಕೆ ಬರುವ ಕಾರ್ಯಕರ್ತರು, ¸ಸಾರ್ವಜನಿಕರಿಗೆ ಅನುಕೂಲವಾಗಲು ಪ್ರತ್ಯೇಕ ಹೆಚ್ಚುವರಿ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯವೂ ನಡೆಯುತ್ತಿದೆ.ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಪಾಸ್ ಸೋಲ್ಡ್

Scroll to Top